Saturday, June 13, 2020

ನನ್ನ ನಲವಿನ ಬಳ್ಳಿ.....

ನನ್ನ ನಲವಿನ ಬಳ್ಳಿ ಮೈದುಂಬಿ ನಲಿವಾಗ
ಲೋಕವೆ, ಹೀರದಿರು ದುಂಬಿಯೊಲು ಹೂವ;
ಬಾಳಿನ ಕಷ್ಟಗಳ ಬಲು ಘೋರ ಪಯಣದಲಿ
ಚಣದೊಂದೆ ಕನಸಿದುವೆ, ಬೆರೆಸದಿರು ನೋವ.

                                          ನನ್ನ ನಲವಿನ ಬಳ್ಳಿ.....

ಸವಿ ಸುಖದೀ ಗಳಿಗೆ ಬಂದು ಮೆಲ್ಲಗೆ ಬಳಿಗೆ
ಪಲ್ಲವಿಸುತಿದೆ ಎದೆಯ ಚೈತ್ರದಂತೆ;
ಇಂದು ನಾ ಮೈ ಮರೆತು ಒಲೆಯುವೆ ಸೊಗ ಬೆರೆತು,
ಆಸೆಗಳ ಚಿವುಟದಿರು ಹಕ್ಕಿಯಂತೆ.

                                          ನನ್ನ ನಲವಿನ ಬಳ್ಳಿ.....

ಆಗಸಕೆ ಎಸೆದಿರುವ ಕಲ್ಲಿನಂತೇರುವೆನು,
ಗಾಳಿಯಲಿ ತೇಲುವೆನು - ಗಂಧದಂತೆ;
ಮತ್ತೆ ಬೀಳುವೆನಿಲ್ಲೆ, ಚಿಂತೆಗಳ ಕೆಸರಲ್ಲೆ -
ಬಿಟ್ಟುಬಿಡು ಈಗೆನ್ನ ಮುಕ್ತನಂತೆ.

                                          ನನ್ನ ನಲವಿನ ಬಳ್ಳಿ.....

                                                                                 - ಕೆ. ಎಸ್. ನಿಸಾರ್ ಅಹಮದ್ 


No comments:

ಶ್ರೀ ಕೃಷ್ಣದೇವರಾಯರ ಆಸ್ಥಾನದಲ್ಲಿದ್ದ ಅಧಿಕಾರಿಗಳ ಹೆಸರುಗಳನ್ನು ತಿಳಿಸಿ?

  ಶ್ರೀಮನು ಶ್ರೀಮಂನ್ ಮಹಾರಾಜಾಧಿರಾಜ ರಾಜಪರಮೇಶ್ವರ ಶ್ರೀ ವೀರಪ್ರತಾಪ ಶ್ರೀ ವೀರ ಕೃಷ್ಣರಾಯ ಮಹಾರಾಯರ ಆಸ್ಥಾನದಲ್ಲಿದ್ದ ಅಧಿಕಾರಿಗಳ ಹೆಸರುಗಳು ಶಾಸನಗಳಲ್ಲಿ ದೊರಕುತ್ತವೆ...