Saturday, June 13, 2020

ಎಲ್ಲ ಮರೆತಿರುವಾಗ...

ಎಲ್ಲ ಮರೆತಿರುವಾಗ ಇಲ್ಲಸಲ್ಲದ ನೆವವ
ಹೂಡಿ ಬರದಿರು ಮತ್ತೆ ಹಳೆಯ ನೆನಪೇ
ಕಲ್ಲಿನಂದದಿ ಬಿದ್ದು ತಿಳಿಯಾದ ಎದೆಗೊಳವ
ರಾಡಿಗೊಳಿಸುವೆಯೇಕೆ ಮಧುರ ನೆನಪೇ

ಕಪ್ಪು ಕಣ್ಣಿನ ನೆಟ್ಟ ನೋಟದರೆಚಣದಲ್ಲಿ
ತೊಟ್ಟ ಬಾಣದ ಹಾಗೆ ಬಾರದಿರು ನೆನಪೇ
ಬಿರಿದ ತುಟಿಗಳ ತುಂಬು ನಗೆಯ ಕಾರಣವನ್ನ
ಹಿರಿದು ಕೊಲ್ಲಲು ಬಳಿಗೆ ಬಾರದಿರು ನೆನಪೇ ||

ಸತ್ತ ಭೂತವನೆತ್ತಿ ಹದ್ದಿನಂದದಿ ತಂದು
ನನ್ನ ಮನದಂಗಳಕೆ ಹಾಕದಿರು ನೆನಪೇ
ಭವ್ಯ ಭವಿತವ್ಯಕ್ಕೆ ಮೊಗ ಮಾಡಿ ನಿಂತಿರುವ
ಬೆನ್ನಲ್ಲೇ ಇರಿಯದಿರು ಓ ಜಾಣ ನೆನಪೇ ||

                                                    - ಕೆ. ಎಸ್. ನಿಸಾರ್ ಅಹಮದ್   

No comments:

ಶ್ರೀ ಕೃಷ್ಣದೇವರಾಯರ ಆಸ್ಥಾನದಲ್ಲಿದ್ದ ಅಧಿಕಾರಿಗಳ ಹೆಸರುಗಳನ್ನು ತಿಳಿಸಿ?

  ಶ್ರೀಮನು ಶ್ರೀಮಂನ್ ಮಹಾರಾಜಾಧಿರಾಜ ರಾಜಪರಮೇಶ್ವರ ಶ್ರೀ ವೀರಪ್ರತಾಪ ಶ್ರೀ ವೀರ ಕೃಷ್ಣರಾಯ ಮಹಾರಾಯರ ಆಸ್ಥಾನದಲ್ಲಿದ್ದ ಅಧಿಕಾರಿಗಳ ಹೆಸರುಗಳು ಶಾಸನಗಳಲ್ಲಿ ದೊರಕುತ್ತವೆ...