Sunday, September 27, 2020

ತುಪ್ಪದ ಮಹತ್ವ

🍯ಖಾಲಿ ಹೊಟ್ಟೆಯಲ್ಲಿ ‘ತುಪ್ಪ’ ತಿಂದರೆ ಏನಾಗುತ್ತದೆ ಗೊತ್ತೇ? ತುಪ್ಪದ ಬಗ್ಗೆ ಇರುವ ಮಹತ್ವ ತಿಳಿಯಿರಿ..

🍯ಒಂದು ನಿಮಿಷ ಸುಮ್ಮನೆ ಕುಳಿತುಕೊಳ್ಳಿ. ಜೊತೆಗೆ ಮುಂಜಾನೆ ಎದ್ದ ತಕ್ಷಣ ಏನು ಮಾಡುತ್ತೀರಾ?ಎನ್ನುವುದನ್ನು ಮೆಲುಕುಹಾಕಿ. ಸಾಮಾನ್ಯವಾಗಿ ಎಲ್ಲರ ಉತ್ತರ ಒಂದೇ ಆಗಿರಬಹುದು. ನೀರು ಕುಡಿಯುತ್ತೇವೆ, ಹಲ್ಲುಜ್ಜುತ್ತೇವೆ, ವ್ಯಾಯಾಮ ಮಾಡುತ್ತೇವೆ ಎನ್ನುವುದಾಗಿರಬಹುದು.

🍯ಅದೇ ಯಾರಾದರೂ ತುಪ್ಪವನ್ನು ತಿನ್ನುತ್ತೇವೆ ಎಂದರೆ ನಿಮ್ಮ ಪ್ರತಿಕ್ರಿಯೆ ಹೇಗಿರಬಹುದು? ತುಪ್ಪ ಎಂದರೆ ಸಾಮಾನ್ಯವಾಗಿ ಎಲ್ಲರ ಮನಸ್ಸಿಗೆ ಬರುವುದು.ಜಿಡ್ಡಿನ ಪದಾರ್ಥ, ಅತಿಯಾದ ಕೊಬ್ಬನ್ನು ಹೊಂದಿರುತ್ತದೆ,ಅದನ್ನು ಮಿತವಾಗಿ ಸೇವಿಸಬೇಕು,ಅತಿಯಾಗಿ ತಿಂದರೆ ಆರೋಗ್ಯ ಹಾಳಾಗುವುದು,ತೂಕ ಹೆಚ್ಚುವುದು ಸೇರಿದಂತೆ ಇನ್ನಿತರ ವಿಚಾರ ಮನಸ್ಸಿಗೆ ಬರಬಹುದು ಅಲ್ಲವೇ?

🍯ಬರೀ ಒಂದೆರಡು ಚಮಚ ತುಪ್ಪದಲ್ಲಿದೆ ಹತ್ತಾರು ಲಾಭ ಆದರೆ ಈ ಲೇಖನದಲ್ಲಿ ತುಪ್ಪ ತಿಂದರೆ ಯಾವೆಲ್ಲಾ ರೋಗವನ್ನು ನಿವಾರಿಸಬಹುದು ಎನ್ನುವ ವಿವರಣೆಯನ್ನು ನೀಡಲಾಗಿದೆ.ಹೌದು, ತುಪ್ಪ ಎಂದರೆ ಅದು ಕೇವಲ ಕೊಬ್ಬಿನ ಪದಾರ್ಥ ಎನ್ನುವುದಕ್ಕೆ ಸೀಮಿತವಾಗಿಲ್ಲ.ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ.

🍯ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

🍯ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು. ಆದರೆ ಇದು ಸತ್ಯ.ತುಪ್ಪದ ಸೇವನೆಯಿಂದ ಯಾವೆಲ್ಲಾ ಸಮಸ್ಯೆಗಳಿಂದ ದೂರ ಇರಬಹುದು ಎನ್ನುವುದನ್ನು ತಿಳಿದುಕೊಳ್ಳಲು ಮುಂದಿರುವ ವಿವರಣೆಯನ್ನು ಪರಿಶೀಲಿಸಿ…

🍯ಜೀವಕೋಶದ ಚಟುವಟಿಕೆ ಹೆಚ್ಚುವುದು ಆಯುರ್ವೇದದ ಪ್ರಕಾರ ಖಾಳಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ದೇಹದ ಎಲ್ಲಾ ಜೀವಕೋಶಗಳಿಗೂ ಪೋಷಕಾಂಶ ದೊರೆಯುವುದು.ಜೀವಕೋಶವನ್ನು ಪುನಃ ಶ್ಚೇತನಗೊಳಿಸಬೇಕು ಎಂದಾದರೆ ತುಪ್ಪವನ್ನು ಸೇವಿಸಬೇಕು.

🍯ಅಲ್ಲದೆ ದೇಹಕ್ಕೆ ಉತ್ತಮವಾದ ಆರೈಕೆಯನ್ನು ನೀಡುವುದು.ಚರ್ಮದ ಕಾಂತಿ ಹೆಚ್ಚುವುದು ತುಪ್ಪ ಜೀವಕೋಶಗಳ ಪೋಷಣೆ ಮತ್ತು ಪುನರುಜ್ಜೀವನ ಗೊಳಿಸುವುದರಿಂದ ಚರ್ಮವು ನೈಸರ್ಗಿಕವಾಗಿಯೇ ಆರೋಗ್ಯವನ್ನು ಪಡೆದುಕೊಳ್ಳುತ್ತದೆ.

🍯ತ್ವಚೆಯಲ್ಲಿರುವ ಶುಷ್ಕತೆಯನ್ನು ಹೋಗಲಾಡಿಸಿ,ಸದಾ ಕಾಂತಿ ಹಾಗೂ ತೇವಾಂಶದಿಂದ ಕೂಡಿರುವಂತೆ ಮಾಡುತ್ತದೆ. ಸೋರಿಯಾಸಿಸ್‍ನಂತಹ ಚರ್ಮ ರೋಗಗಳನ್ನು ಇದು ತಡೆಯುವುದು.ಸಂಧಿವಾತವನ್ನು ತಡೆಯುತ್ತದೆ ತುಪ್ಪ ನೈಸರ್ಗಿಕವಾದ ಲುಬ್ರಿಕೆಂಟ್ ಮತ್ತು ಓಮೆಗಾ-3 ಕೊಬ್ಬಿನಾಮ್ಲವನ್ನು ಒಳಗೊಂಡಿದೆ.

🍯ಹಾಗಾಗಿ ಇದನ್ನು ಕೀಲುಗಳಿಗೆ ಉತ್ತಮ ಆರೈಕೆ ಮಾಡುವುದು.ಸಂಧುಗಳ ನೋವಿಗೆ ಹಾಗೂ ಇನ್ನಿತರ ಮೂಳೆ ಸಂಬಂಧಿತ ಅನಾರೋಗ್ಯಕ್ಕೆ ತುಪ್ಪದ ಲೇಪನವನ್ನು ಮಾಡಬಹುದು. ತುಪ್ಪದ ಸೇವನೆಯಿಂದ ಆಸ್ಟಿಯೊಪೊರೋಸಿಸ್ ಸೇರಿದಂತೆ ಅನೇಕ ಮೂಳೆ ಸಮಸ್ಯೆಗಳನ್ನು ನಿವಾರಿಸುತ್ತದೆ.

🍯ಮಿದುಳಿನ ಕಾರ್ಯ ಚಟುವಟಿಕೆಯನ್ನು ಹೆಚ್ಚಿಸುತ್ತದೆ ಖಾಲಿ ಹೊಟ್ಟೆಯಲ್ಲಿ ತುಪ್ಪದ ಸೇವನೆ ಮಾಡುವುದರಿಂದ ಮೆದುಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ನಿವಾರಣೆ ಹೊಂದುತ್ತವೆ. ಜೊತೆಗೆ ನೆನಪಿನ ಶಕ್ತಿ,ಕಲಿಕೆ,ಜ್ಞಾನ ಗ್ರಹಣ,ಕಾರ್ಯಚಟುವಟಿಕೆಗಳನ್ನು ಸುಧಾರಿಸುತ್ತದೆ.

🍯ಅಲ್ಲದೆ ಬುದ್ಧಿಮಾಂಧ್ಯತೆ ಅಲ್ಝಮೈರ್ ನಂತಹ ಕಾಯಿಲೆ ಬರದಂತೆ ತಡೆಯುವುದು.ತೂಕ ಇಳಿಸುವುದು ಸಾಮಾನ್ಯವಾಗಿ ತೂಕ ಹೆಚ್ಚಿಸಲು ತುಪ್ಪ ಸೇವಿಸಬೇಕು ಎನ್ನುವುದನ್ನು ಕೇಳಿರುತ್ತೀರಿ.ಅದೇ ನೀವು ಮುಂಜಾನೆ ಖಾಲಿ ಹೊಟ್ಟೆಯಲ್ಲಿ 5-10 ಮಿಲಿಯಷ್ಟು ತುಪ್ಪವನ್ನು ಸೇವಿಸಿದರೆ ನಿಮ್ಮ ಚಯಾಪಚಯ ಕ್ರಿಯೆ ಸುಧಾರಣೆ ಕಾಣುತ್ತದೆ.

🍯ಅಲ್ಲದೆ ಗಣನೀಯವಾದ ತೂಕ ಇಳಿಕೆಯನ್ನು ನೀವು ನಿರೀಕ್ಷಿಸಬಹುದು.ಕೂದಲು ಉದುರುವಿಕೆಯನ್ನು ತಡೆಯುತ್ತದೆ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸುವುದರಿಂದ ಅದು ಕೇಶರಾಶಿಯ ಸಂರಕ್ಷಣೆಗೆ ಸಹಾಯವಾಗುತ್ತದೆ.ಕೂದಲಿನ ಫೋಲಿಸೆಲ್ಸ್ ಗಳು ಆರೋಗ್ಯವಾಗಿರುವಂತೆ ಮಾಡುತ್ತದೆ.

🍯ಇದರಿಂದ ಹೊಳಪಿನಿಂದ ಕೂಡಿರುವ ದಟ್ಟವಾದ ಕೂದಲನ್ನು ನೀವು ಹೊಂದಬಹುದು. ಲ್ಯಾಕ್ಟೋಸ್‍ಗಳನ್ನು ಸುಧಾರಿಸುತ್ತದೆ ಕೆಲವರಿಗೆ ಹಾಲು ಅಥವಾ ಹಾಲಿನಿಂದ ತಯಾರಿಸಿರುವ ಉತ್ಪನ್ನಗಳನ್ನು ಸೇವಿಸದಾಗ ಸೂಕ್ತ ರೀತಿಯ ಜೀರ್ಣಕ್ರಿಯೆ ಉಂಟಾಗುವುದಿಲ್ಲ.

🍯ಅದೇ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ಸ್ವೀಕರಿಸಿದರೆ ಲ್ಯಾಕ್ಟೋಸ್ ಸಮಸ್ಯೆಯು ಸುಧಾರಣೆ ಕಾಣುತ್ತದೆ.ಜೀರ್ಣ ಕ್ರಿಯೆಯೂ ಉತ್ತಮವಾಗಿ ನೆರವೇರುವುದು.ಕ್ಯಾನ್ಸರ್ ನಿಂದ ದೂರ ಇಡುವುದು ನೈಸರ್ಗಿಕವಾದ ತುಪ್ಪವನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಅನೇಕ ಬಗೆಯ ಕ್ಯಾನ್ಸರ್ ಕಾಯಿಲೆಯಿಂದ ದೂರ ಇರಬಹುದು.

🍯ಆಯುರ್ವೇದದ ಪ್ರಕಾರ ತುಪ್ಪ ಕ್ಯಾನ್ಸರ್ ವಿರೋಧಿ ಲಕ್ಷಣವನ್ನು ಒಳಗೊಂಡಿದೆ ಎಂದು ಹೇಳಲಾಗುತ್ತದೆ.ತುಪ್ಪದ ಇನ್ನಷ್ಟು ಪ್ರಯೋಜನಗಳನ್ನು ತಿಳಿಯಿರಿ.ದೇಹದ ತೇವಕಾರಕ ಎಣ್ಣೆಯಾಗಿ ಒಂದು ವೇಳೆ ನಿಮ್ಮ ಚರ್ಮ ವಿಪರೀತ ಒಣದಾಗಿದ್ದರೆ ಈ ವಿಧಾನವನ್ನು ಅನುಸರಿಸಿ

🍯ಎರಡು ದೊಡ್ಡ ಚಮಚ ಅಪ್ಪಟ ತುಪ್ಪವನ್ನು ಕರಗುವಷ್ಟು ಬಿಸಿಮಾಡಿ. ಬಳಿಕ ಉಗುರುಬೆಚ್ಚನೆಯ ತಾಪಮಾನಕ್ಕೆ ಬರುವಷ್ಟು ತಣಿಸಿ. ಬಳಿಕ ಈ ತುಪ್ಪವನ್ನು ತೆಳುವಾಗಿ ಒಣಚರ್ಮದ ಮೇಲೆಲ್ಲಾ ನಯವಾಗಿ ಮಸಾಜ್ ಮಾಡುತ್ತಾ ಸವರಿಕೊಳ್ಳಿ.

🍯ಸುಮಾರು ಒಂದು ಘಂಟೆ ಬಿಟ್ಟು ಸ್ನಾನ ಮಾಡಿ.ಮುಖದ ಕಾಂತಿಗೆ ಒಂದು ದೊಡ್ಡ ಚಮಚ ಕಡ್ಲೆಹಿಟ್ಟು, ಒಂದು ದೊಡ್ಡ ಚಮಚ ಅಪ್ಪಟ ತುಪ್ಪ ಹಾಗೂ ಅಗತ್ಯವಿರುವಷ್ಟು ನೀರು ಬೆರೆಸಿ ಚೆನ್ನಾಗಿ ಬೆರೆಸಿ ಲೇಪನ ತಯಾರಿಸಿ. ಈ ಲೇಪನವನ್ನು ಈಗ ತಾನೇ ತಣ್ಣೀರಿನಿಂದ ತೊಳೆದುಕೊಂಡ ಮುಖಕ್ಕೆ ತೆಳುವಾಗಿ ಹಚ್ಚಿಕೊಳ್ಳಿ.

🍯ಇದನ್ನು ಪೂರ್ಣವಾಗಿ ಒಣಗಲು ಬಿಡಿ.ಒಣಗಿದ ಬಳಿಕ ಈ ಲೇಪನ ಬಿರಿಬಿಡಲು ಪ್ರಾರಂಭಿಸುತ್ತದೆ. ಈಗ ಕೇವಲ ತಣ್ಣೀರಿನಿಂದ ತೊಳೆದುಕೊಳ್ಳಿ.

🍯ಸೋಪು ಬಳಸಬೇಡಿ. ಬಾಡಿ ಲೋಷನ್ ರೂಪದಲ್ಲಿ ದೇಹದ ತ್ವಚೆಯನ್ನು ಇಡಿಯ ದಿನ ಕೋಮಲ ಮತ್ತು ಮೃದುವಾಗಿಸಲು ತುಪ್ಪವೂ ಸಮರ್ಥವಾಗಿದೆ.

🍯ಇದಕ್ಕಾಗಿ ಸಮಪ್ರಮಾಣದಲ್ಲಿ ತುಪ್ಪ ಮತ್ತು ಕೊಬ್ಬರಿ ಎಣ್ಣೆಯನ್ನು ಬೆರೆಸಿ ಕೊಂಚ ಲ್ಯಾವೆಂಡರ್ ಎಣ್ಣೆಯ ಹನಿಗಳನ್ನು ಸೇರಿಸಿ ನಯವಾದ ಲೇಪನ ತಯಾರಿಸಿ.ಸ್ನಾನದ ಬಳಿಕ ಈ ಲೇಪನವನ್ನು ತೆಳುವಾಗಿ ಕೊಂಚ ಮಸಾಜ್ ಮೂಲಕ ಸೂಕ್ಷ್ಮಭಾಗಗಳನ್ನು ಬಿಟ್ಟು ಉಳಿದೆಲ್ಲಾ ಭಾಗಗಳಿಗೆ ಹಚ್ಚಿಕೊಳ್ಳಿ.ಕೆಟ್ಟ ಕೊಲೆಸ್ಟ್ರಾಲ್ ತಗ್ಗಿಸುತ್ತದೆ

🍯ಉತ್ತರ ಭಾರತದಲ್ಲಿ ಹೃದಯಸಂಬಂಧಿ ಕಾಯಿಲೆಗಳು ಇತರ ಭಾಗಗಳಿಗೆ ಹೋಲಿಸಿದರೆ ಕಡಿಮೆ ಇದೆ.ಇದರ ಮೂಲ ಕಾರಣವೇನೆಂದರೆ ಉತ್ತರ ಭಾರತದ ಜನರು ಎಣ್ಣೆಗೆ ಬದಲಾಗಿ ಹೆಚ್ಚಾಗಿ ತುಪ್ಪವನ್ನೇ ಸೇವಿಸುತ್ತಾರೆ.

🍯ಈ ಅಭ್ಯಾಸದಿಂದ ದೇಹದ ರಕ್ತನಾಳಗಳ ಒಳಗೆ ಸಂಗ್ರಹಗೊಂಡಿದ್ದ ಕೆಟ್ಟಕೊಲೆಸ್ಟ್ರಾಲ್ ( LDL (low-density lipoprotein)) ಸಡಿಲಗೊಂಡು ನಿವಾರಣೆಯಾಗಲು ಸಾಧ್ಯವಾಗುತ್ತದೆ. ಇದು ಹೃದಯದ ಮೇಲಿನ ಹೊರೆಯನ್ನು ತಗ್ಗಿಸಿ ಹೃದಯ ಸಂಬಂಧಿ ತೊಂದರೆಗಳ ಸಾಧ್ಯತೆಯನ್ನು ಅಪಾರವಾಗಿ ಕಡಿಮೆಗೊಳಿಸುತ್ತದೆ.

No comments:

ಶ್ರೀ ಕೃಷ್ಣದೇವರಾಯರ ಆಸ್ಥಾನದಲ್ಲಿದ್ದ ಅಧಿಕಾರಿಗಳ ಹೆಸರುಗಳನ್ನು ತಿಳಿಸಿ?

  ಶ್ರೀಮನು ಶ್ರೀಮಂನ್ ಮಹಾರಾಜಾಧಿರಾಜ ರಾಜಪರಮೇಶ್ವರ ಶ್ರೀ ವೀರಪ್ರತಾಪ ಶ್ರೀ ವೀರ ಕೃಷ್ಣರಾಯ ಮಹಾರಾಯರ ಆಸ್ಥಾನದಲ್ಲಿದ್ದ ಅಧಿಕಾರಿಗಳ ಹೆಸರುಗಳು ಶಾಸನಗಳಲ್ಲಿ ದೊರಕುತ್ತವೆ...