Friday, December 27, 2024

ಯಾರಿಗೆ ಯಾರುಂಟು ಎರವಿನ ಸಂಸಾರ

 


ಯಾರಿಗೆ ಯಾರುಂಟು ಎರವಿನ ಸಂಸಾರ

ನೀರಮೇಲಣ ಗುಳ್ಳೆ ನಿಜವಲ್ಲ ಹರಿಯೇ

ಬಾಯಾರಿತು ಎಂದು ಬಾವಿನೀರಿಗೆ ಪೋದೆ
ಬಾವಿಲಿ ಜಲ ಬಿತ್ತಿ ಬರಿದಾಯ್ತು ಹರಿಯೆ

ಬಿಸಿಲು ಗಾಳಿಗಾಗಿ ಮರದ ನೆರಳಿಗೆ ಪೋದೆ
ಮರ ಬಗ್ಗೆ ಶಿರದ ಮೇಲೊರಗಿತೋ ಹರಿಯೆ

ಅಡವಿಯೊಳನೆಮಾಡಿ ಗಿಡಕೆ ತೊಟ್ಟಿಲು ಕಟ್ಟಿ
ತೊಟ್ಟಿಲಿನ ಶಿಶು ಮಾಯವಾಯಿತು ಹೆರಿಯೆ

ತಂದೆ ಶ್ರೀ ಪುರಂದರವಿಠಲ ನಾರಾಯಣ
ನಾ ಸಾಯೊ ಹೊತ್ತಿಗೆ ನೀ ಕಾಯೊ ಹರಿಯೆ

ಕೃತಿ : ಪುರಂದರ ದಾಸರು