ಕೊಲ್ಲುವುದಾದರೆ ಕೊಂದುಬಿಡು......

SANTOSH KULKARNI
By -
0 minute read
0

ಕೊಲ್ಲುವುದಾದರೆ ಕೊಂದುಬಿಡು ಹೀಗೆ ಕಾಡಬೇಡ
ಗಾಯಗೊಂಡಿರುವ ಹೃದಯವಿದು ಚೆಲ್ಲಾಟವಾಡಬೇಡ.

ದುಂದಿಯು ಧಗ ಧಗ ಧಗ ಉರಿದಂತೆ
ಅಂದು ನಿನ್ನ ಪ್ರೀತಿ
ಹೆಪ್ಪುಗಟ್ಟಿರುವ ಹಿಮದಂತೆ
ಇಂದು ನಿನ್ನ ರೀತಿ.

ಕಾಳಾಗದೆ ನಿನ್ನಾಳದ ಪ್ರೀತಿ
ಆಯಿತೇ ಬರೀ ಜೊಳ್ಳು ಹೇಳು
ಪ್ರೀತಿಯ ಸೇತುವೆಯಂತೆ ತೋರಿ
ಮರೆಯಾಯಿತೆ ಮಳೆಬಿಲ್ಲು.

ಇನ್ನೂ ಏಕೀ ಮುಚ್ಹುಮರೆ
ತೆರೆಗಳ ನೀ ಸರಿಸು
ತೊರೆಯುವುದಾದರೆ ತೊರೆದುಬಿಡು
ಇಲ್ಲವೇ ಸ್ವೀಕರಿಸು.

                                            -  ಬಿ ಆರ್ ಲಕ್ಷ್ಮಣರಾವ್


Post a Comment

0Comments

Post a Comment (0)
Today | 28, February 2025