ಯಾರಿಗೆ ಯಾರುಂಟು ಎರವಿನ ಸಂಸಾರ

SANTOSH KULKARNI
By -
0 minute read
0

 


ಯಾರಿಗೆ ಯಾರುಂಟು ಎರವಿನ ಸಂಸಾರ

ನೀರಮೇಲಣ ಗುಳ್ಳೆ ನಿಜವಲ್ಲ ಹರಿಯೇ

ಬಾಯಾರಿತು ಎಂದು ಬಾವಿನೀರಿಗೆ ಪೋದೆ
ಬಾವಿಲಿ ಜಲ ಬಿತ್ತಿ ಬರಿದಾಯ್ತು ಹರಿಯೆ

ಬಿಸಿಲು ಗಾಳಿಗಾಗಿ ಮರದ ನೆರಳಿಗೆ ಪೋದೆ
ಮರ ಬಗ್ಗೆ ಶಿರದ ಮೇಲೊರಗಿತೋ ಹರಿಯೆ

ಅಡವಿಯೊಳನೆಮಾಡಿ ಗಿಡಕೆ ತೊಟ್ಟಿಲು ಕಟ್ಟಿ
ತೊಟ್ಟಿಲಿನ ಶಿಶು ಮಾಯವಾಯಿತು ಹೆರಿಯೆ

ತಂದೆ ಶ್ರೀ ಪುರಂದರವಿಠಲ ನಾರಾಯಣ
ನಾ ಸಾಯೊ ಹೊತ್ತಿಗೆ ನೀ ಕಾಯೊ ಹರಿಯೆ

ಕೃತಿ : ಪುರಂದರ ದಾಸರು

Post a Comment

0Comments

Post a Comment (0)