ದರ್ಬೆಯನ್ನು “ಪವಿತ್ರ” ಎಂದು ಏಕೆ ಕರೆಯುತ್ತಾರೆ ?
ದರ್ಬೆ, ಕುಶ, ಕಾಶ,ಬರ್ಹಿ, ಇವುಗಳು ಪವಿತ್ರ ದರ್ಬೆಯ ವಿವಿಧ ನಾಮಗಳು. ಒಮ್ಮೆ ಗರುಡನು ತನ್ನ ತಾಯಿಯಾದ ವಿನತೆಗೆ, ಸರ್ಪಗಳ ತಾಯಿಯಾದ ಕದ್ರುವಿನಿಂದ ದಾಸ್ಯದ ಮುಕ್ತಿ ಪಡೆಯಲು, ದೇವೇಂದ್ರನಿಂದ ಅಮೃತವನ್ನು ಪಡೆದು ಅದನ್ನು ಸರ್ಪಗಳಿಗೆ ನೀಡುವುದಕ್ಕಾಗಿ ನೀವೆಲ್ಲರೂ ಸ್ನಾನ ಮಾಡಿ ಶುದ್ಧರಾಗಿ ಬರಲು ಹೇಳುತ್ತಾನೆ. ಮತ್ತು ಆ ಸರ್ಪಗಳು ಪುನಃ: ಬರುವವರೆಗೂ ಅಮೃತವನ್ನು ದರ್ಬೆಯ ಮೇಲೆ ಇಟ್ಟಿರುತ್ತಾನೆ. ಅಷ್ಟರಲ್ಲಿ ದೇವೇಂದ್ರನು ಬಂದು ಅಮೃತವನ್ನು ಹೊತ್ತುಕೊಂಡು ಹೋಗುವಾಗ ಅಮೃತದ ಒಂದು ಬಿಂದು ದರ್ಭೆಯ ಮೇಲೆ ಬೀಳುತ್ತದೆ. ಆದ್ದರಿಂದ ದರ್ಭೆಯು ಶುದ್ಧವಾಗಿದೆ ಮತ್ತು ಪವಿತ್ರವೆನಿಸಿದೆ.ಅಲ್ಲದೇ ಯಜ್ಞ ವರಾಹ ರೂಪೀ ಭಗವಂತನ ರೋಮದಿಂದ ದರ್ಭೆಯೂ, ಬೆವರಿನಿಂದ ಎಳ್ಳೂ ಹೊರ ಬಂದ ಕಾರಣ ಇವು ಎಲ್ಲಾ ಕಾರ್ಯಗಳಿಗೂ ಪಾವಿತ್ರ್ಯತೆ ನೀಡಲು ಬೇಕಾಗುತ್ತವೆ.