ಆದಿಲಕ್ಷ್ಮಿ ದೇವಿಗೆ ಆರತಿಯ ಎತ್ತಿರೆ

SANTOSH KULKARNI
By -
0 minute read
0

 


ಆದಿಲಕ್ಷ್ಮಿ ದೇವಿಗೆ ಆರತಿಯ ಎತ್ತಿರೆ

ಅರಿಶಿನ ಕುಂಕುಮ ಹಚ್ಚಿ ಹೂಮಾಲೆ ಹಾಕಿರೆ
ಧಾನ್ಯಲಕ್ಷ್ಮಿಗೆ ನೀವು ಧೂಪ ದೀಪ ಹಚ್ಚಿರೆ
ಕನಕಲಕ್ಷ್ಮಿಗೆ ನೀವು ನೈವೇದ್ಯವ ತನ್ನಿರೆ
ಬಲದ ಕಾಲು ಮುಂದೆ ಇಟ್ಟು ಹೊಸಿಲು ದಾಟಿ ಬಾರಮ್ಮ
ಭಾಗ್ಯ ತಾಯಿ ಮಾಂಗಲ್ಯ ಸೌಭಾಗ್ಯವ ನೀಡಮ್ಮ
ಹಾಲು ತುಪ್ಪ ಹೊಳೆ ಹರಿಸಿ ಹರುಷ ಸುಖವ ತಾರಮ್ಮ
ಧನ ಧಾನ್ಯವ ಕೊಟ್ಟು ಸಂತಾನ ಕರುಣಿಸಮ್ಮ
ಕ್ಷೀರಾಬ್ದಿತನಯೇ ಆನಂದನಿಲಯೆ ವಿಷ್ಣುಪ್ರಿಯೆ ಬಾರೆ
ಕಮಲನಯನೆ ನಿಜ ಕಮಲವದನೆ ಕಮಲಾಕ್ಷವಲ್ಲಭೆ ಬಾರೆ
ಪುಷ್ಪಸುಗಂಧಿನಿ ಹರಿಣವಿಲೋಚನಿ ಕರುಣೆಯನ್ನು ತೋರೇ
ಅನಂತರೂಪಿಣಿ ಚಿರಸುಖದಾಯಿನಿ ಇಷ್ಟಾರ್ಥವನೇ ತಾರೆ
ಸಾಹಿತ್ಯ: ಆರ್. ಎನ್. ಜಯಗೋಪಾಲ್

Post a Comment

0Comments

Post a Comment (0)