Showing posts with label purandara dasaru. Show all posts
Showing posts with label purandara dasaru. Show all posts

Saturday, December 28, 2024

ಏಳು ನಾರಾಯಣ ಏಳು ಲಕ್ಷ್ಮೀರಮಣ

 

ಏಳು ನಾರಾಯಣ ಏಳು ಲಕ್ಷ್ಮೀರಮಣ

ಏಳು ಶ್ರೀಗಿರಿವಾಸ ಶ್ರೀ ವೆಂಕಟೇಶ
ಏಳಯ್ಯ ಬೆಳಗಾಯಿತು….ಏಳಯ್ಯ ಬೆಳಗಾಯಿತು ||
ದಾಸರೆಲ್ಲರು ಬಂದು ಧೂಳಿದರ್ಶನಗೊಂಡು
ಲೇಸಾಗಿ ತಾಳ ದಂಡಿಗೆಯ ಪಿಡಿದು
ಕೇಶವನೆ ನಿಮ್ಮ ಸಿರಿನಾಮವನು ಸ್ಮರಿಸುತಲಿ
ವಾಸುದೇವನೆ ಉದಯದಲ್ಲಿ ಪಾಡುತಿಹರು ||೧||
ಕಾಸಿದ್ದ ಹಾಲುಗಳ ಕಾವಡಿಯ ತುಂಬಿಟ್ಟು
ಲೇಸಾಗಿ ಕೆನೆಮೊಸರು ಬೆಣ್ಣೆಯನು ಮೆದ್ದು
ಶೇಷಶಯನನೆ ಏಳು ಸಮುದ್ರಮಥನವ ಮಾಡು
ದೇಶ ಕೆಂಪಾಯಿತು ಏಳಯ್ಯ ಹರಿಯೇ ||೨||
ಅರಳು ಮಲ್ಲಿಗೆ ಜಾಜಿ ಪರಿಮಳದ ಪುಷ್ಪಗಳ
ಸುರರು ತಂದಿಹರಯ್ಯ ಸುಜನರೊಡೆಯ
ಅರವಿಂದಲೋಚನನೆ ಕೋಳಿ ಕೂಗಿತು ಏಳು
ಪುರಂದರವಿಠಲನೆ ಬೆಳಗಾಯಿತು ||೩||
ಸಾಹಿತ್ಯ: ಪುರಂದರದಾಸರು